Tamanvi Silk
Darbe Salon
Mahalingeshwara Car Air Condition

ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ.5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು.

Out Look Fashion

ಮಾರ್ಚ್ 5 ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಅವರು ಪುತ್ತೂರಿನ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ತಾರಿಗುಡ್ಡೆಯ ಸಂತ್ರಸ್ತೆ ಮನೆಗೆ ಭೇಟಿ ನೀಡಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅಧ್ಯಕ್ಷರು ಸಂತ್ರಸ್ತೆಯ ಪರವಾಗಿ ತಾಯಿಯಂತೆ ಅವಳ ಜೊತೆ ನಿಲ್ಲುತ್ತೇನೆ. ಮಹಿಳಾ ಆಯೋಗ ನೊಂದ ಮಹಿಳೆಯರಿಗೆ ತಾಯಿ ಸ್ಥಾನದಲ್ಲಿದ್ದು ಸಹಾಯ ಮಾಡುತ್ತದೆ. ಸಂತ್ರಸ್ತೆ ಯುವತಿಗೆ ಎಲ್ಲಾ ರೀತಿಯ ಸಹಾಯವನ್ನು ಆಯೋಗದ ಮುಖಾಂತರ ಮಾಡಲಾಗುವುದು. ಯುವತಿಯ ಮುಂದಿನ ಶಿಕ್ಷಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಿ ಆಕೆಯನ್ನು ಆರ್ಥಿಕ,ಶೈಕ್ಷಣಿಕವಾಗಿ ಸದೃಢಗೊಳಿಸುವ ಪ್ರಯತ್ನವನ್ನೂ ಮಾಡುತ್ತೇನೆ. ಪ್ರಕರಣ ನ್ಯಾಯಾಲಯದ ಮುಂದೆ ಇರುವಾಗ ಇದಕ್ಕಿಂತ ಹೆಚ್ಚು ಮಾತನಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

Jaya Refrigeration and Air Condition

ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅವ್ಯವಸ್ಥೆಯನ್ನು ನೋಡುವಂತೆ ಮಾಧ್ಯಮ ಪ್ರತಿನಿಧಿಗಳು ಆಯೋಗ್ ಅಧ್ಯಕ್ಷೆಯನ್ನು ವಿನಂತಿಸಿದ ಸಂದರ್ಭದಲ್ಲಿ ಕಾಲೇಜಿನ ಸ್ಥಿತಿಗತಿಯನ್ನು ಪರಾಮರ್ಶಿಸಲು ಹೊರಟಿದ್ದ ಆಯೋಗದ ಅಧ್ಯಕ್ಷೆಯನ್ನು ಸ್ಥಳದಲ್ಲಿ ಮಹಿಳಾ ಕಾಂಗ್ರೇಸ್ಸಿನ ಮುಖಂಡರು ತಡೆದ ಹಿನ್ನಲೆಯಲ್ಲಿ ಕಾಲೇಜಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ರದ್ದುಗೊಳಿಸಿ,ಮಂಗಳೂರಿಗೆ ತೆರಳಿದ್ದಾರೆ.

ಈ ವೇಳೆ ಸಂತ್ರಸ್ತೆಯ ತಾಯಿ ಸಹಿತ ಹಲವರು ಉಪಸ್ಥಿತರಿದ್ದರು.