Tamanvi Silk
Darbe Salon
Mahalingeshwara Car Air Condition

ಕಡಬ : ಕಡಬ ತಾಲೂಕಿನ ರಾಮಕುಂಜ ಗ್ರಾಮದ ಕಂಪ ಪ್ರದೇಶದಲ್ಲಿ ಬಾವಿ ತೋಡುವ ಸಂದರ್ಭದಲ್ಲಿ ಕಲ್ಲು ಸೀಳಲು ಬಳಸಿದ ಸ್ಫೋಟಕಗಳು ಆಕಸ್ಮಿಕವಾಗಿ ಸಿಡಿದು ಸುತ್ತಮುತ್ತಲಿನ ಮನೆಗಳಿಗೆ ಹಾನಿ ಉಂಟಾದ ಘಟನೆಗೆ ಸಂಬಂಧಿಸಿದಂತೆ ಡಿವೈಎಸ್‌ಪಿ ರೋಹಿಣಿ ಸಿ.ಕೆ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Out Look Fashion

ಮೈಸೂರು ನಿವಾಸಿ ಸೋಮಶೇಖರ ಅವರು ಬಾವಿ ತೋಡುವ ಕೆಲಸ ಮಾಡಿಸುತ್ತಿದ್ದ ವೇಳೆ, ಕಲ್ಲು ಸೀಳುವ ಉದ್ದೇಶದಿಂದ ಕೋಡಿಂಬಲ ನಿವಾಸಿ ಶಿವರಾಮ ಎಂಬವರು ಬಾವಿಯೊಳಗೆ ಸ್ಫೋಟಕಗಳನ್ನು ಸಿಡಿಸಿದ್ದರು. ಈ ವೇಳೆ ಸ್ಫೋಟದ ತೀವ್ರತೆಯಿಂದ ಸಮೀಪದ ನಿವಾಸಿಗಳಾದ ವಾಮನ ಮೂಲ್ಯ ಹಾಗೂ ಕೆ.ಟಿ. ಮೋಹನ ಅವರ ಮನೆಗಳಿಗೆ ಹಾನಿಯಾಗಿದೆ.
ಘಟನೆಯ ಸಂಬಂಧ ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾವಿಯೊಳಗೆ ಇನ್ನೂ ಆರು ಜೀವಂತ ಸ್ಫೋಟಕಗಳು ಇರುವುದನ್ನು ಪತ್ತೆಹಚ್ಚಲಾಗಿದೆ.

Jaya Refrigeration and Air Condition