


ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಟಿವಿಕೆಗೆ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಟಿವಿಕೆ ಮುಖ್ಯಸ್ಥ ವಿಜಯ್ ಧನ್ಯವಾದ ಅರ್ಪಿಸಿದ್ದಾರೆ.
ದಶಕಗಳಿಂದ ಎಐಎಡಿಎಂಕೆ ಮತ್ತು ಡಿಎಂಕೆ ಆಡಳಿತಕ್ಕೆ ಒಳಪಟ್ಟಿದ್ದ ತಮಿಳುನಾಡು ರಾಜಕೀಯದಲ್ಲಿ ವಿಜಯ್ ಕ್ರಾಂತಿಕಾರಿ ಬದಲಾವಣೆ ತಂದಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯ ಜನಾದೇಶ ನಿನ್ನೆ ಹೊರಬಿದ್ದಿದ್ದು, ಟಿವಿಕೆ ಭರ್ಜರಿ ಗೆಲುವು ದಾಖಲಿಸಿದೆ.


‘ಮಾನ್ಯ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೇ, ನಿಮ್ಮ ಶುಭಾಶಯಗಳಿಗೆ ಧನ್ಯವಾದಗಳು. ನಮ್ಮ ಜನರ ಯೋಗಕ್ಷೇಮವೇ ನಮ್ಮ ಏಕೈಕ ಗುರಿಯಾಗಿದೆ. ರಾಜಕೀಯವನ್ನು ಮೀರಿ, ನಾವು ರಾಜ್ಯದ ಪ್ರಗತಿ ಮತ್ತು ತಮಿಳುನಾಡಿನ ಜನರ ಕಲ್ಯಾಣದ ಮೇಲೆ ಗಮನ ಕೇಂದ್ರೀಕರಿಸುತ್ತೇವೆ. ಈ ಪ್ರಯತ್ನದಲ್ಲಿ ಕೇಂದ್ರ ಸರ್ಕಾರದ ಬೆಂಬಲವನ್ನು ನಾವು ಎದುರು ನೋಡುತ್ತಿದ್ದೇವೆ ಎಂದು ವಿಜಯ್ ಎಕ್ಸ್ ಪೋಸ್ಟ್ನಲ್ಲಿ ಧನ್ಯವಾದ ತಿಳಿಸಿದ್ದಾರೆ.
‘ಲೋಕಸಭೆಯ ಗೌರವಾನ್ವಿತ ವಿರೋಧ ಪಕ್ಷದ ನಾಯಕರ ಕರೆ ಮತ್ತು ಶುಭಾಶಯಗಳಿಗಾಗಿ ನನ್ನ ಪ್ರಾಮಾಣಿಕ ಧನ್ಯವಾದಗಳು. ಸಾರ್ವಜನಿಕ ಸೇವೆಯಲ್ಲಿ ಶ್ರೇಷ್ಠತೆಗೆ ಮತ್ತು ಸಾಮೂಹಿಕ ಸಹಕಾರದ ಅಗತ್ಯವಿರುವ ನಮ್ಮ ರಾಜ್ಯದ ಸಾಂಸ್ಕೃತಿಕ ನೀತಿಯನ್ನು ಸಂರಕ್ಷಿಸಲು ನಾವು ಬದ್ಧರಾಗಿರುತ್ತೇವೆ. ರಾಜಕೀಯವನ್ನು ಮೀರಿ, ತಮಿಳುನಾಡಿನ ಜನರ ಕಲ್ಯಾಣಕ್ಕೆ ನಾವು ಆದ್ಯತೆ ನೀಡುತ್ತೇವೆ ಎಂದು ರಾಹುಲ್ ಗಾಂಧಿ ಪೋಸ್ಟ್ಗೆ ಟಿವಿಕೆ ನಾಯಕ ಪ್ರತಿಕ್ರಿಯಿಸಿದ್ದಾರೆ.
