Tamanvi Silk
Darbe Salon
Mahalingeshwara Car Air Condition

ಬೆಂಗಳೂರು: ಖಾತೆ ಹಂಚಿಕೆಯಾದ ಒಂದೇ ಗಂಟೆಯಲ್ಲಿ ಆರೋಗ್ಯ ಸಚಿವ ಯು.ಟಿ ಖಾದರ್‌ (U. T. Khader) ಜಯನಗರದ ಆಸ್ಪತ್ರೆಗೆ (Hospital) ಸರ್ಪ್ರೈಸ್ ವಿಸಿಟ್ ನೀಡಿದ್ದಾರೆ.

Out Look Fashion

ಆಸ್ಪತ್ರೆಯ ಸ್ವಚ್ಛತೆ, ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿದೆಯೇ ಎಂದು ಪರಿಶೀಲನೆ ನಡೆಸಿದ್ದಾರೆ. ರಾತ್ರಿ ಪಾಳಯದಲ್ಲಿ ಸಿಬ್ಬಂದಿ ಕೊರತೆ ಇರುವುದು ಈ ವೇಳೆ ಗಮನಕ್ಕೆ ಬಂದಿದೆ. ಇನ್ನೂ ಇರುವ ಸಿಬ್ಬಂದಿ ಪೈಕಿ ಕೆಲವರು ಕೆಲಸಕ್ಕೆ ಗೈರಾಗಿದ್ದರು. ಇದರಿಂದ ಸಿಬ್ಬಂದಿ ಮೇಲೆ ಸಚಿವರು ಗರಂ ಆಗಿದ್ದಾರೆ.

Jaya Refrigeration and Air Condition

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತಾಡಿದ ಅವರು, ಆಸ್ಪತ್ರೆಯ ನೈಜವಾದ ಪರಿಸ್ಥಿತಿ ನೋಡಲು ಬಂದೆ. ಏನೆಲ್ಲಾ ಲೋಪದೋಷವಿದೆ ಎಂದು ನೋಡಿದ್ದೇನೆ. ಎಲ್ಲಾ ಕಡೆಯೂ ವಿಸಿಟ್ ಮಾಡಿದ್ದೇನೆ. ಇವತ್ತು ಇಬ್ಬರು ವೈದ್ಯರು ಗೈರಾಗಿದ್ದರು. ಅವ್ರಿಗೆ ಇಂದು ಎಚ್ಚರಿಕೆ ನೀಡಿ, ವಿಶ್ವಾಸಕ್ಕೆ ತೆಗೆದುಕೊಂಡು, ಕೆಲಸ ಮಾಡುವಂತೆ ಸೂಚಿಸುತ್ತೇನೆ.

ಬೆಳಗ್ಗೆ ಹೊತ್ತಲ್ಲಿ ಬೇರೆ ಬೇರೆ ಕೆಲಸ, ಸಭೆಗಳು ಇರುತ್ತೆ. ಹೀಗಾಗಿ ಈ ಹೊತ್ತಲ್ಲಿ ಬಂದೆ. ಸರಿಯಾದ ಪಿಕ್ಚರ್ ಈ ಹೊತ್ತಲ್ಲೇ ಸಿಗೋದು. ಸರ್ಕಾರಿ ಆಸ್ಪತ್ರೆಗಳಿಗೆ ರೋಗಿಗಳು ಹೆಚ್ಚು ಬರ್ತಾರೆ. ಎಷ್ಟೇ ಜನ ಬಂದ್ರೂ ವೈದ್ಯರು ನೋಡಬೇಕು.