Category: ಪ್ರಾದೇಶಿಕ ಸುದ್ದಿ

ವಿಷುಕಣಿ 5.0 ಯಶಸ್ವಿ ಆಯೋಜನೆ: ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ : ಮೇ 17ರಂದು ಉಜಿರೆಯ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ ವಿಷುಕಣಿ 5.0–2026 ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಅಂತರಾಷ್ಟ್ರೀಯ ಕಲಾವಿದರ ಸಾಂಸ್ಕೃತಿಕ ಪ್ರದರ್ಶನ ಹಾಗೂ 33 ಬಗೆಯ ಕೇರಳ ಮಾದರಿಯ ವಿಶೇಷ ಖಾದ್ಯಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ಬೆಳ್ತಂಗಡಿ ತಾಲೂಕಿನ ಹಿಂದೂ…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈಶ್ವರ ಖಂಡ್ರೆ ಎಚ್ಚರಿಕೆ: ಪ್ಲಾಸ್ಟಿಕ್, ನದಿ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮ

ಕುಕ್ಕೆ ಸುಬ್ರಹ್ಮಣ್ಯ: ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ರಾಜ್ಯಸಭೆ ಚುನಾವಣೆ, ಡೀಮ್ಡ್ ಅರಣ್ಯ ಸಮಸ್ಯೆ, ಪ್ಲಾಸ್ಟಿಕ್ ನಿಯಂತ್ರಣ ಹಾಗೂ ಕುಮಾರಧಾರಾ ನದಿ ಮಾಲಿನ್ಯ…

ನರಿಮೊಗರು: 5 ಲಕ್ಷ ಅನುದಾನದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿ ಪೂಜೆ

ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಪರಮಾರ್ಗ – ಕುಕ್ಕುತ್ತಡಿ – ಅರೆಪಿಕಟ್ಟ ಸಂಪರ್ಕ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು ಅವರು ಕಾಮಗಾರಿಗೆ ಚಾಲನೆ ನೀಡಿದರು. ಈ ರಸ್ತೆ ಅಭಿವೃದ್ಧಿ ಕಾಮಗಾರಿಗೆ…

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ,414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮಂಗಳೂರು: ರಾ. ಹೆ.66 ರಲ್ಲಿ ಬೈಕಂಪಾಡಿಯಿಂದ KIOCL ಜಂಕ್ಷನ್ ವರೆಗೆ ಒಟ್ಟು 414.16 ಕೋಟಿ ರೂ. ವೆಚ್ಚದಲ್ಲಿ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರಕಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು…

ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಮಂಗಳೂರು ನಗರದ ಹೊರವಲಯದ ಪ್ರಮುಖ ಹೆದ್ದಾರಿ ಜಂಕ್ಷನ್‌ಗಳಾದ ಬೈಕಂಪಾಡಿ ಮತ್ತು ಕೂಳೂರು ಬಳಿ ಸುಗಮ ಸಂಚಾರ ಹಾಗೂ ಅಪಘಾತ ಮುಕ್ತ ವಲಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವದ ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದೆ ಎಂದು…

ಸುಳ್ಯ : ವಿವಿಧೆಡೆ ಎ.ಐ ಕ್ಯಾಮರಾ ಅಳವಡಿಕೆ ನಿಯಮ ಪಾಲಿಸದ ವಾಹನ ಸವಾರರಿಗೆ ಕಾದಿದೆ ಬಿಗ್ ಶಾಕ್

ರಾಜ್ಯದ ಪ್ರಮುಖ ನಗರಗಳಲ್ಲಿ ಮಾತ್ರ ಅಳವಡಿಕೆಯಾಗಿದ್ದ Al ಸಿ.ಸಿ ಕ್ಯಾಮೆರಾ ಇದೀಗ ಸುಳ್ಯಕ್ಕೂ ಕಾಲಿರಿಸಿದ್ದು, ಸಂಚಾರ ನಿಯಮಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಪೋಲೀಸ್‌ ಇಲಾಖೆ ಸಜ್ಜಾಗಿದ್ದು ವಾಹನ ಸವಾರರು ಎಚ್ಚರಿಕೆ ವಹಿಸಬೇಕಾಗಿದೆ. ಸುಳ್ಯ ನಗರದಲ್ಲಿ ಎಐ ಕ್ಯಾಮೆರಾ ಅಳವಡಿಸಿ ಮೂಲಕ…

ಮಡಪ್ಪಾಡಿ : ಕಾಡಾನೆಗಳ ದರ್ಬಾರ್ – ಕೃಷಿಕರಲ್ಲಿ ಹೆಚ್ಚಿದ ಆತಂಕ

ಕೃಷಿಕರು ತಮ್ಮ ತೋಟ ಹಾಗೂ ಬೆಳೆಗಳ ರಕ್ಷಣೆಗೆ ಹರಸಾಹಸ ಪಡುತ್ತಿದ್ದು, ರಾತ್ರಿ ವೇಳೆ ಹೊರಗೆ ತೆರಳಲು ಸಹ ಭಯಪಡುವ ಪರಿಸ್ಥಿತಿ ಎದುರಾಗಿದೆ. ಕಾಡಾನೆಗಳ ನಿರಂತರ ಸಂಚಾರದಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ…

ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ, ಇಂದು ( ಮೇ.21) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ಮುಂಗಾರು ಪೂರ್ವ ಮಾರುತಗಳ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು…

ಯಕ್ಷಗಾನ ಕಲಾವಿದ ಬೆಳ್ಳಾರೆ ವಾಸುದೇವ ರೈ ಯವರ ಪುತ್ರ ಸೂರಜ್ ರೈ ಅಪಘಾತದಲ್ಲಿ ಮೃತ್ಯು – ನ್ಯೂಸ್ ಫೋಕಸ್

ಬೆಳ್ಳಾರೆ ವಾಸುದೇವ ರೈ ಮತ್ತು ಶರ್ಮಿಳಾ ವಿ. ರೈ ದಂಪತಿಯ ಪುತ್ರ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಉದ್ಯೋಗದಲ್ಲಿದ್ದ ಸೂರಜ್ ರೈಯವರು (27 ವ.) ವಾಹನ ಅಪಘಾತದಲ್ಲಿ ಗಾಯಗೊಂಡು ಇಂದು ಮುಂಜಾನೆ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿರುವುದಾಗಿ ತಿಳಿದುಬಂದಿದೆ. ಮೇ. 15ರಂದು ರಾತ್ರಿ ಬೆಂಗಳೂರಿಗೆ…

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ: ಗೃಹ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ

ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ರಸ್ತೆ ಬದಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾ ಬಿಟ್ಟಿಯಾಗಿ ಕಸ ಎಸೆಯುವುದನ್ನು ತಡೆಯಲು ಪೊಲೀಸ್ ಇಲಾಖೆಯಿಂದ ದಂಡ ವಿಧಿಸಿ ಸ್ವಯಂ ಪ್ರೇರಿತವಾಗಿ (Suo Moto) FIR ದಾಖಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಕೋರಿ ಕರ್ನಾಟಕ…

ಬಕ್ರೀದ್ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ, ಹತ್ಯೆ ತಡೆಗೆ ಬಜರಂಗದಳದಿಂದ ಪೊಲೀಸರಿಗೆ ಮನವಿ

ಮಂಬರಲಿರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನುಬಾಹಿರವಾಗಿ ಗೋವಂಶದ ಸಾಗಾಣಿಕೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ ಬಲಿ(ಕುರ್ಬಾನಿ) ನಡೆಯುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಲು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಜಾನುವಾರು ಸಾಗಾಟ ನಿಯಮಾವಳಿ…

ಕೋಡಿಬೆಂಗ್ರೆ ಸಮುದ್ರದಲ್ಲಿ ಬೋಟು ಮುಳುಗಡೆ: ಆರು ಮಂದಿ ಮೀನುಗಾರರ ರಕ್ಷಣೆ

ಮಲ್ಪೆ : ಮಲ್ಪೆ ಮೀನುಗಾರಿಕೆ ಬಂದರಿನಿಂದ ತೆರಳಿದ ಆಳಸಮುದ್ರ ಬೋಟು ಮಂಗಳವಾರ ರಾತ್ರಿ ಕೋಡಿಬೆಂಗ್ರೆ ಸಮೀಪದ ಮುಳುಗಡೆಗೊಂಡಿದ್ದು ಅದರಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಬೋಟಿನ ತಾಂಡೇಲ ಉತ್ತರ ಕನ್ನಡ ಜಿಲ್ಲೆಯ ರಾಘವೇಂದ್ರ, ಕಾರ್ಮಿಕರಾದ ರೋಹಿದಾಸ್ ಮೊಗೇರ, ಶಾಮ ಸುಂರ್ದ ಮಲೀಕ್,…

ಪುತ್ತೂರು : ನಾಳೆ ಈ ಸ್ಥಳಗಳಲ್ಲಿ ವಿದ್ಯುತ್ ನಿಲುಗಡೆ – ನ್ಯೂಸ್ ಫೋಕಸ್

ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಮೇ21 ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5:30 ರವರೆಗೆ ಕಾಂಚನ, ಉಪ್ಪಿನಂಗಡಿ ಎಕ್ಸಪ್ರೆಸ್, ವಾಟರ್ ಸಪ್ಪೆ, ಉಪ್ಪಿನಂಗಡಿ ಓಲ್ಡ್ ಮತ್ತು ರಾಮಕುಂಜ ಫೀಡರ್‌ಗಳಿಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆ…

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್‌ ವಿಷಪೂರಿತ ಹೇಳಿಕೆ: ವಿಹೆಚ್‌ಪಿ ಖಂಡನೆ

ಮಂಗಳೂರು: ತಮಿಳುನಾಡು ವಿಧಾನಸಭೆಯಂತಹ ಪವಿತ್ರ ಸದನದಲ್ಲಿ ಉದಯನಿಧಿ ಸ್ಟಾಲಿನ್ (Udayanidhi Stalin) ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಅತ್ಯಂತ ಕೀಳುಮಟ್ಟದ ಮತ್ತು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆಂದು ವಿಶ್ವ ಹಿಂದೂ ಪರಿಷತ್‌ (VHP) ತೀವ್ರವಾಗಿ ಖಂಡಿಸಿದೆ. ರಾಜಕೀಯ ಲಾಭಕ್ಕಾಗಿ ಕೋಟ್ಯಂತರ ಜನರ…

ಮೂಡಬಿದಿರೆ, ಬೆಳ್ತಂಗಡಿ, ಬಂಟ್ವಾಳ ಮತ್ತು ವಿಟ್ಲ ಭಾಗಗಳಲ್ಲಿ ಕಡಿಮೆ ಎತ್ತರದಲ್ಲಿ ಹಾರಾಡಿ ಆತಂಕ ಸೃಷ್ಟಿ

ಮಂಗಳೂರು, ಮೇ 14: ಹವಾಮಾನ ವೈಪರಿತ್ಯ ಹಾಗೂ ಗುಡುಗು ಸಹಿತ ಭಾರೀ ಮಳೆಯ ಪರಿಣಾಮ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆ ವಿಮಾನಗಳ ಲ್ಯಾಂಡಿಂಗ್ ವ್ಯತ್ಯಯಗೊಂಡಿತು. ಕೆಳಗಿಳಿಯಲು ಸಾಧ್ಯವಾಗದೆ ಕೆಲವು ಸಮಯ ವಿಮಾನಗಳು ಆಗಸದಲ್ಲೇ ಸುತ್ತಾಡಿದ ಪರಿಣಾಮ ಸಾರ್ವಜನಿಕರಲ್ಲಿ ಆತಂಕದ…

ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ – ಚಿಕಿತ್ಸೆಗೆ ನೆರವಿನ ಕೋರಿಕೆ

ಬೆಟ್ಟಂಪಾಡಿ ಸರಳೀಕಾನ ನಿವಾಸಿ ಸಶಿತ್ ಎಸ್ ಅವರು ದಿನಾಂಕ 13-05-2026ರಂದು ಸಂಜೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್ ಮತ್ತು ಟಾಟಾ ಏಸ್ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಸಶಿತ್ ಅವರ ಬಲ ಕಾಲಿನ…

ಸುಳ್ಯದಲ್ಲಿ ಸಂಜೆ ಸುರಿದ ಭಾರಿ ಮಳೆಗೆ ಪೈಚಾರ್ ಪೆಟ್ರೋಲ್ ಬಂಕ್ ಬಳಿ ಜಲಾವೃತ – ನ್ಯೂಸ್ ಫೋಕಸ್

ಸುಳ್ಯ : ಇಂದು ಸಂಜೆ ಸುರಿದ ಭಾರಿ ಮಳೆಗೆ ಪೈಚಾರ್ ಪೆಟ್ರೋಲ್ ಬಂಕ್ ಬಳಿ ಜಲಾವೃತ ಗೊಂಡು ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಇನ್ನು ಸುರಿಯುವ ಮಳೆಗೆ ಇಂತಹ ಪರಿಸ್ಥಿತಿ ಉಂಟಾಗದಂತೆ ಈ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಬಗೆಹರಿಸಬೇಕಾಗಿ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಫಲನಾಭವಿಗಳು ಮೃತಪಟ್ಟ ಬಳಿಕವೂ ಖಾತೆಗೆ ಗೃಹಲಕ್ಷ್ಮಿ ಹಣ: ದಕ್ಷಿಣ ಕನ್ನಡದಲ್ಲಿ 22 ಕೋಟಿ ಜಮೆ ಬೆಳಕಿಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೂ 22 ಕೋಟಿ ರೂಪಾಯಿ ಗೃಹಲಕ್ಷ್ಮಿ ಯೋಜನೆಯಡಿ ಜಮೆಯಾಗಿರುವುದು ಬೆಳಕಿಗೆ ಬಂದಿದೆ. ಜಿಲ್ಲಾಡಳಿತ ತಕ್ಷಣ ಕ್ರಮಕ್ಕೆ ಮುಂದಾಗಿದ್ದು, ಹಣ ವಾಪಸ್ ಪಡೆಯಲು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮ ತಡೆಯಲು ಅಧಿಕಾರಿಗಳಿಗೆ ಸೂಚಿಸಿದೆ. ಜೀವಂತ ಫಲಾನುಭವಿಗಳನ್ನು…

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯರ ಭೇಟಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರನ್ನು ಸೇವಾಭಾರತಿ ತಂಡ ಮೇ 12 ರಂದು ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ…

ಮಂಗಳೂರಿಗರ ಬಹುವರ್ಷಗಳ ಬೇಡಿಕೆ ಶೀಘ್ರ ಈಡೇರಿಕೆ: ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್

ಮಂಗಳೂರು: ಮಂಗಳೂರು-ತಣ್ಣೀರುಬಾವಿ ಬ್ರಿಡ್ಜ್​​ ಮಂಗಳೂರಿನ ಬಹುವರ್ಷದ ಬೇಡಿಕೆ. ಸದ್ಯ ಬ್ರಿಡ್ಜ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್​​ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆ ಮೂಲಕ ತಣ್ಣೀರುಬಾವಿ ಬೀಚ್‌ಗೆ ತೆರಳಲು ದಶಕಗಳಿಂದ…

ಭಾರೀ ಗಾಳಿ ಮಳೆಗೆ ಮನೆಗೆ ತೀವ್ರ ಹಾನಿ: ಸಂಕಷ್ಟದಲ್ಲಿದ್ದ ಮಹಿಳೆಗೆ ‘ವಿಜಯ ಸಾಮ್ರಾಟ್’ ನೆರವು – ಹೊಸ ಮನೆ ನಿರ್ಮಾಣದ ಭರವಸೆ

ಪುತ್ತೂರು: ಭಾರೀ ಗಾಳಿ ಮಳೆಗಳಿಂದ ಮನೆ ಹಾನಿಗೊಂಡು ಸಂಕಷ್ಟಕ್ಕೆ ಸಿಲುಕಿದ್ದ ವಿಧವೆ ಮಹಿಳೆಯ ನೆರವಿಗೆ ವಿಜಯ ಸಾಮ್ರಾಟ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಹಜ್ ರೈ ಬಳಜ್ಜ ಧಾವಿಸಿ ಮಾನವೀಯತೆ ಮೆರೆದಿದ್ದಾರೆ. ತಾತ್ಕಾಲಿಕವಾಗಿ ಮನೆಯ ಮೇಲ್ಪಾವಣಿ ದುರಸ್ತಿ ಮಾಡಿ ಶೀಟು ಅಳವಡಿಸುವ ವ್ಯವಸ್ಥೆ…

₹25 ಲಕ್ಷ ಮೌಲ್ಯದ ಚಿನ್ನಾಭರಣಗಳು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಮಂಗಳೂರು : ಲೋಲಿಟ್ಟ ಹಾಗೂ ಅವರ ಕುಟುಂಬದವರು ಮಲ್ಲಿಕಟ್ಟೆಯಿಂದ ಮೇರಿ ಹಿಲ್ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ,ಚಿನ್ನಾಭರಣಗಳಿದ್ದ ವ್ಯಾನಿಟಿ ಬ್ಯಾಗ್ ಅನ್ನು ಆಟೋ ರಿಕ್ಷಾದಲ್ಲಿ ಮರೆತು ಬಿಟ್ಟಿದ್ದರು. ಈ ಕುರಿತು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ತಕ್ಷಣವೇ, ಠಾಣೆಯ ಸಿಬ್ಬಂದಿಗಳು…

ಇಂದು ಪುತ್ತೂರಿನ ಈ ಕಡೆಗಳಲ್ಲಿ ವಿದ್ಯುತ್ ನಿಲುಗಡೆ – ನ್ಯೂಸ್ ಫೋಕಸ್

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 100/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಕೆಮ್ಮಾಯಿ ಮತ್ತು ವಾಟರ್ ಸಪ್ಪೆ ಫೀಡರ್‌ನಲ್ಲಿ ಮೇ.12 ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 5:30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.…

ಸುಳ್ಯದ ತೊಡಿಕಾನ ಗ್ರಾಮದಲ್ಲಿ ಟವರ್‌ ಇದ್ದರೂ ಸಿಗದ ನೆಟ್‌ ವರ್ಕ್‌: 1 ತಿಂಗಳಿನಿಂದ ಬಹುತೇಕ ಮೊಬೈಲ್‌ಗಳು ನಾಟ್‌ ರೀಚೆಬಲ್‌, ಕಾರಣವೇನು?

ಸುಳ್ಯದ ತೊಡಿಕಾನ ಗ್ರಾಮದಲ್ಲಿ 2 BSNL ಟವರ್‌ ಗಳಿದ್ದರೂ ಸಹ 2ಜಿ, 3ಜಿ ನೆಟ್ವರ್ಕ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಇದರಿಂದಾಗಿ ಗ್ರಾಮದಲ್ಲಿನ ಜನರು ನೆಟ್‌ ವರ್ಕ್‌ ಸಿಗದೆ ಪರದಾಡುವಂತಾಗಿದೆ. ಸುಮಾರು 1 ತಿಂಗಳಿನಿಂದ ಗ್ರಾಮದಲ್ಲಿ ನೆಟ್‌ ವರ್ಕ್‌ ಸಮಸ್ಯೆ ನಿರಂತರವಾಗಿದ್ದು, ನಾಟ್‌ ರೀಚಬಲ್‌…

ಬಲ್ನಾಡು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಬಲ್ನಾಡು ಗ್ರಾಮ ಪಂಚಾಯತ್ ಅರಿವು ಕೇಂದ್ರದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವಪ್ಪ ಪಿ. ಆರ್ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮೀ, ಗ್ರಂಥಾಲಯ ಸಲಹಾ ಸಮಿತಿ ಅಧ್ಯಕ್ಷರಾದ ಶ್ರೀಮತಿ…

ಪುತ್ತೂರು ಮಹಿಳಾ ಪ್ರಥಮದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್ ಸೆಕ್ಷನ್ ಆರಂಭ

ಪುತ್ತೂರು: ಪುತ್ತೂರಿನ ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ವರ್ಷದಿಂದಲೇ ಸೈನ್ಸ್ ( ಪದವಿ ವಿಜ್ಞಾನ) ವಿಭಾಗ ಪ್ರಾರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಅವರನ್ನು ಭೇಟಿಯಾಗಿ…

ನ್ಯಾಯವಾದಿ ನಿಶಾಂತ್ ಅವರ ಮುಂದಾಳತ್ವದಲ್ಲಿ ಆರಂಭಗೊಂಡ ನೂತನ ಸಂಸ್ಥೆಯ ಉದ್ಘಾಟನೆ

ನ್ಯಾಯವಾದಿ ನಿಶಾಂತ್ ಅವರ ಮುಂದಾಳತ್ವದಲ್ಲಿ ಆರಂಭಗೊಂಡ ನೂತನ ಸಂಸ್ಥೆಯ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ನಿಶಾಂತ್ ಅವರ ತಂದೆ ಭಾಸ್ಕರ ಪೂಜಾರಿ ಹಾಗೂ ತಾಯಿ ವನಿತಾ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿ ಹಾಗೂ ಪುತ್ತೂರು…

ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ವತಿಯಿಂದ ಸಹಾಯಧನ ವಿತರಣೆ

ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊತ್ತದಲ್ಲಿ ಅನಾರೋಗ್ಯದಿಂದ ಮನೆಯಲ್ಲಿಯೇ ಇದ್ದು ತೀವ್ರ ಕಷ್ಟದಲ್ಲಿ ಇರುವ ಎಲೆಕ್ಟ್ರಿಷಿಯನ್ ಆಗಿದ್ದ ಅಶೋಕ್ ಸಿಂಗಣಿ ಎಂಬವರಿಗೆ ವಜ್ರತೇಜಸ್ ತಂಡದಿಂದ…

ಮಂಗಳೂರು: ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – ವೈದ್ಯರಿಲ್ಲದೆ ಮಹಿಳೆಯರಿಂದಲೇ ಹೆರಿಗೆ

ಮಂಗಳೂರು: ರೈಲಿನಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳೂರು-ಬೆಂಗಳೂರು ರೈಲಿನಲ್ಲಿ ನಡೆದಿದೆ. ಮಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ತುಂಬು ಗರ್ಭಿಣಿಗೆ ರೈಲಿನಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ. ವೈದ್ಯರಿಲ್ಲದೇ 30 ನಿಮಿಷದವರೆಗೂ ಕಾದ ಜನ ಬಳಿಕ ಹೆರಿಗೆಗಾಗಿ ಪರದೆ ಕಟ್ಟಿ ರೈಲಿನಲ್ಲಿದ್ದ ಮಹಿಳೆಯರೇ…

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ – 8 ಮಂದಿಗೆ ಗಾಯ

ಮಂಗಳೂರು: ದೈವದ ಭಂಡಾರ (Daiva Bhandara) ಮೆರವಣಿಗೆ ವೇಳೆ ಕಾಲು ಸಂಕ (Foot Bridge) ಕುಸಿದು ಬಿದ್ದು 8 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮೂಡಬಿದ್ರೆ (Moodbidri) ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ. ದೈವದ…

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ LPG/CNG ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರಿಕ್ಷಾ ಚಾಲಕರು ಹಾಗೂ ಮಾಲಕರು ಎದುರಿಸುತ್ತಿರುವ ಗಂಭೀರ ಆರ್ಥಿಕ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು, ಮೋಟಾರ್ ಮತ್ತು ಜನರಲ್ ಮಜ್ದೂರು ಸಂಘ (ಬಿಎಂಎಸ್) ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಮನವಿಯ ನೇತೃತ್ವವನ್ನು ಜಿಲ್ಲಾಧ್ಯಕ್ಷರಾದ ಅನಿಲ್…

ಕನ್ಯಾಡಿ ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಾಗೂ ಮೊಗ್ರು ಗ್ರಾಮ ಮುಗೇರಡ್ಕ- ಅಲೆಕ್ಕಿ ಶ್ರೀರಾಮ ಶಿಶುಮಂದಿರ ಮಕ್ಕಳ ಶಿಕ್ಷಣ ಮತ್ತು ಅನ್ನಯಜ್ಞ ಯೋಜನೆಗೆ ಶ್ರೀ ಕುಸುಮಾಧರ ಮತ್ತು ಶ್ರೀಮತಿ ಪೂರ್ಣಿಮ ಇವರ ಶುಭವಿವಾಹ ಸಂದರ್ಭದಲ್ಲಿ ನವಜೋಡಿಗಳಿಂದ ದೇಣಿಗೆ ಹಸ್ತಾಂತರ

ಮೊಗ್ರು : ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಹೇರ ನಿವಾಸಿ, ಕನ್ಯಾಡಿ ಸೇವಾಭಾರತಿ ಸಂಸ್ಥೆಯ ಸಿಬ್ಬಂದಿಯಾದ ಶ್ರೀ ಕುಸುಮಾಧರ ಹಾಗೂ ಶ್ರೀಮತಿ ಪೂರ್ಣಿಮಾರವರ ಶುಭವಿವಾಹವು ಕೊರಿಂಜ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಎಪ್ರಿಲ್.20 ರoದು ನೆರವೇರಿತು. ಈ ಸಂದರ್ಭದಲ್ಲಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ…

ಕೆಮ್ಮಾಯಿ ನಿವಾಸಿ ವಿಷ್ಣು ಮೆಟಲ್ ವರ್ಕ್ಸ್ ನ ಮಾಲಕ ವಿಶ್ವನಾಥ ಗೌಡ ನಿಧನ – ನ್ಯೂಸ್ ಫೋಕಸ್

ಪುತ್ತೂರು :ಕೆಮ್ಮಾಯಿ ಬೋವುದಕಾಡು ನಿವಾಸಿ ವಿಷ್ಣು ಮೆಟಲ್ ವರ್ಕ್ಸ್ ನ ಮಾಲಕರು, ಬಿಜೆಪಿ ಹಿರಿಯ ಕಾರ್ಯಕರ್ತರೂ ಆಗಿದ್ದ ವಿಶ್ವನಾಥ ಗೌಡ ಇವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಾರ್ ಗಳಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ಅಕ್ರಮ ಚಟುವಟಿಕೆ ಆರೋಪಿಯ ಮನೆಗೆ ಖಾಕಿ ದಾಳಿ,ಕಾರುಗಳು ವಶ

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಭಾಗದಲ್ಲಿರುವ ಸದಾಫ್ ಜಿ ಮೊಹಮ್ಮದ್ ಮನೆ ಬಳಿ ಪೊಲೀಸರು ದಾಳಿ ನಡೆಸಿದ ವೇಳೆ, ಆರೋಪಿ ಮನೆಯ…

ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ‘ಸೆವನ್ ಸೀಸ್ ಮರಿನರ್’ ಆಗಮನ

ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರ (NMPA) ನಿನ್ನೆ (ಶನಿವಾರ) ಐಷಾರಾಮಿ ಕ್ರೂಸ್ ಹಡಗು ಸೆವನ್ ಸೀಸ್ ಮರಿನರ್ (Seven Seas Mariner) ಅನ್ನು ಸ್ವಾಗತಿಸಿದ್ದು, ಇದು ಭಾರತದ ಪಶ್ಚಿಮ ಕರಾವಳಿಯಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಬಹಾಮಾಸ್…

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ – ನ್ಯೂಸ್ ಫೋಕಸ್

ಬಲ್ನಾಡು : ಇಲ್ಲಿನ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಭಕ್ತರ ದಾನಸಹಾಯದೊಂದಿಗೆ ಸಂಪೂರ್ಣ ಶಿಲಾಮಯ ದಾರಂದವನ್ನು ಅಳವಡಿಸಲಾಗುತ್ತಿದೆ. ಮೊದಲು ಮರದಿಂದ ನಿರ್ಮಿಸಲಾಗಿದ್ದ ದಾರಂದವನ್ನು ಇದೀಗ ಕಲ್ಲಿನಿಂದ ನಿರ್ಮಿಸಿ ಶಾಶ್ವತ ರೂಪ ನೀಡಲಾಗುತ್ತಿದೆ. ದಾನಿಗಳ ಸಹಕಾರದಿಂದ ನಡೆಯುತ್ತಿರುವ ಈ ಕಾರ್ಯ ಗಮನ ಸೆಳೆಯುತ್ತಿದೆ.…

ಲಕ್ಷ್ಮೀ ಪೆಂಡೆಂಟ್ ಇರುವ ಚಿನ್ನದ ಸರ ಬಿದ್ದು ಹೋದ ಬಗ್ಗೆ ಪ್ರಕಟಣೆ – ನ್ಯೂಸ್ ಫೋಕಸ್

ಪುತ್ತೂರು : ದಿನಾಂಕ 9 ಏಪ್ರಿಲ್ ಗುರುವಾರ ರಾತ್ರಿಯ ವೇಳೆ ಕೂಡು ರಸ್ತೆಯಿಂದ ಪುರುಷರಕಟ್ಟೆ ಮಾರ್ಗವಾಗಿ ಮುಕ್ವೆ ಮಜಲುಮಾರು ಜಾತ್ರೆಗೆ ಹೋದ ಸಂದರ್ಭ ಲಕ್ಷ್ಮೀ ಪೆಂಡೆಂಟ್ ಇರುವ ಚಿನ್ನದ ಸರ ಬಿದ್ದು ಹೋಗಿರುತ್ತದೆ. ಚಿನ್ನದ ಸರದ ಮಾಲೀಕರು ದೈವ ದೇವರ ಮೊರೆ…

ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಮತ್ತು ವಿವೇಚನಾ ಅನುದಾನದಡಿ ಬೆಳ್ತಂಗಡಿ ತಾಲೂಕಿನ ದೇವಸ್ಥಾನಗಳಿಗೆ ಅನುದಾನ ಮಂಜೂರು -ನ್ಯೂಸ್ ಫೋಕಸ್

ಬೆಳ್ತಂಗಡಿಯ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜ ಅವರು ತಾಲೂಕಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಮಹತ್ವದ ಅನುದಾನವನ್ನು ಒದಗಿಸಿದ್ದಾರೆ. ಅನುದಾನ ವಿವರಗಳು:🔸 ಗರ್ಡಾಡಿ ಗ್ರಾಮದ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿಗೆ ರೂ.1.00ಕೋಟಿ.🔸ಕರಾಯ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರೂ.20.00ಲಕ್ಷ.🔸 ಶ್ರೀ…

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರು ಏ.15ಕ್ಕೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ. ಆದಿಚುಂಚನಗಿರಿ ಮಠದಲ್ಲಿ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶ್ರೀ ಮಠದ ಕುರಿತು ಮಾತನಾಡಲಿದ್ದಾರೆ. ಫೆಬ್ರವರಿ ತಿಂಗಳಲ್ಲೇ ಅವರು…

ಪುತ್ತೂರಿನಲ್ಲಿ ‘ಪೈನ್ ಕಿಲ್ಲರ್ ತ್ಯಜಿಸಿ ಕಿಡ್ನಿ ರಕ್ಷಿಸಿ ಜೀವ ಉಳಿಸಿ ಜಾಗೃತಿ ಜಾಥಾ’ ಅಭಿಯಾನ – ನ್ಯೂಸ್ ಫೋಕಸ್

ಪುತ್ತೂರು; ವಿವಿಧ ಆರೋಗ್ಯ ಸಮಸ್ಯೆಗಳಿಗೆ ಸೀಮಿತವಾಗಿ ವೈದ್ಯರು ನೀಡಿದ ಪೈನ್ ಕಿಲ್ಲರ್ ಗಳನ್ನು ಸ್ವಯಂ ವೈದ್ಯ ನೆಲೆಯಲ್ಲಿ ನಿರಂತರವಾಗಿ ಬಳಕೆ ಮಾಡುವ ಮೂಲಕ ಕಿಡ್ನಿ ಸಮಸ್ಯೆಗಳಿಗೆ ತಮ್ಮನ್ನು ತಾವು ತೆರೆದುಕೊಳ್ಳುವ ಯುವಜನತೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ `ಪೈನ್‍ಕಿಲ್ಲರ್ ತ್ಯಜಿಸಿ..ಕಿಡ್ನಿ ರಕ್ಷಿಸಿ ಜೀವ…

ಪುತ್ತೂರು ಮಹಾಲಿಂಗೇಶ್ವರ ಜಾತ್ರೋತ್ಸವ ಹಿನ್ನೆಲೆ: ಬಂಧಿತರಿಗೆ ಜಾಮೀನು ವಿಚಾರದಲ್ಲಿ ವಾದ ಮಾಡದಂತೆ ಮನವಿ ಮಾಡಿದ ಈಶ್ವರ ಭಟ್‌ ಪಂಜಿಗುಡ್ಡೆ– ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 2026ನೇ ಸಾಲಿನ ವಾರ್ಷಿಕ ಜಾತ್ರೋತ್ಸವವು ಏಪ್ರಿಲ್ 10ರಿಂದ ಏಪ್ರಿಲ್ 20ರವರೆಗೆ ನಡೆಯಲಿದ್ದು, ಜಾತ್ರೋತ್ಸವವನ್ನು ಶಾಂತಿಯುತವಾಗಿ ಹಾಗೂ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಮಹತ್ವದ ಮನವಿ ಹೊರಬಂದಿದೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಈಶ್ವರ ಭಟ್‌…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ವತಿಯಿಂದ ಪುತ್ತೂರು ತಾಲೂಕಿನ 80 ಜನ ವಾತ್ಸಲ್ಯ ಪಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ – ನ್ಯೂಸ್ ಫೋಕಸ್

ಜ್ಞಾನವಿಕಾಸ ಕಾರ್ಯಕ್ರಮದ ರೂವಾರಿಗಳು ಈ ಕಾರ್ಯಕ್ರಮ ಮೂಲಕ ಅದೆಷ್ಟೋ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ತಂದು ಸ್ವ ಉದ್ಯೋಗಕ್ಕೆ ಪ್ರೇರಣೆ ಕೊಟ್ಟು ಹೆಣ್ಣನ್ನು ಕುಟುಂಬದ ಶಕ್ತಿಯನ್ನಾಗಿ ಮಾಡಿದ, ಹಾಗೂ ವಾತ್ಸಲ್ಯ ಕಾರ್ಯಕ್ರಮದ ಮೂಲಕ ಸಮಾಜದ ಅದೆಷ್ಟೋ ನಿರ್ಗತಿಕರ , ಬಡವರ ಕಣ್ಣೀರನ್ನು…

ಮಂಗಳೂರಿನಲ್ಲಿ 5.5 ಟನ್ ಧಾರ್ಮಿಕ ತ್ಯಾಜ್ಯ ಸಂಗ್ರಹ

ಮಂಗಳೂರು: ನಗರದಲ್ಲಿ 5.5 ಟನ್‌ ಧಾರ್ಮಿಕ ತ್ಯಾಜ್ಯ ಸಂಗ್ರಹವಾಗಿದೆ. ರಾಮಕೃಷ್ಣ ಮಿಷನ್‌ ) ಕೇವಲ 10 ದಿನಗಳಲ್ಲಿ ಈ ಪ್ರಮಾಣದ ತ್ಯಾಜ್ಯವನ್ನು ಸಂಗ್ರಹಿಸಿದೆ. ಮನೆಯಲ್ಲಿ‌ ಪೂಜಿಸಲ್ಪಟ್ಟ ದೇವರ ಪೋಟೋ, ವಿಗ್ರಹ ಸೇರಿದಂತೆ ಧಾರ್ಮಿಕ ತ್ಯಾಜ್ಯಗಳನ್ನು ಎಲ್ಲೆಡೆ ಎಸೆಯಲಾಗುತ್ತದೆ. ದೇವಸ್ಥಾನದ ಆವರಣಗಳು, ಮರದ…

ನವ ಮಂಗಳೂರು ಬಂದರು ಮೇಲ್ದರ್ಜೆಗೇರಿಸಲು 438.29 ಕೋಟಿ ರೂ. ಅನುಮೋದನೆ- ನ್ಯೂಸ್ ಫೋಕಸ್

ಮಂಗಳೂರು: ನವ ಮಂಗಳೂರು ಬಂದರಿನ ಮೂಲಸೌಕರ್ಯಗಳು ಮೇಲ್ದರ್ಜೆಗೇರಿಸಲು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯವು 438.29 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಯಿಂದ ಬಂದರಿನ ಬರ್ತ್‌ ನಂ.9ರಲ್ಲಿ ಕೈಗೆತ್ತಿಕೊಳ್ಳಲಿರುವ ಪುನರ್‌ ಅಭಿವೃದ್ಧಿ ಕಾಮಗಾರಿಯು ಲಿಕ್ವಿಡ್‌ ಕಾರ್ಗೋ…

ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಮಂದಾರ ಕಲಾವಿದರು ಉಜಿರೆ ಅಭಿನಯಿಸುವ ‘ಮಾಯೆದ ತುಡರ್’ ಭಕ್ತಿ ಪ್ರಧಾನ ಹಾಸ್ಯಮಯ ನಾಟಕ – ನ್ಯೂಸ್ ಫೋಕಸ್

ಪುತ್ತೂರು: ಮಹಾಲಿಂಗೇಶ್ವರನ ಪುಣ್ಯ ಮಣ್ಣಿನಲ್ಲಿ ಮಂದಾರ ಕಲಾವಿದರು ಉಜಿರೆ ಅಭಿನಯಿಸುವ ಮಾಯೆದ ತುಡರ್ ಭಕ್ತಿ ಪ್ರಧಾನ ಹಾಸ್ಯಮಯ ನಾಟಕ ಪುತ್ತೂರಿನ ಪುರಭವನದಲ್ಲಿ ಏಪ್ರಿಲ್ 4ರ ಶನಿವಾರ ಸಂಜೆ 7 ಗಂಟೆಗೆ ನಡೆಯಲಿದೆ. ಮಂದಾರ ಕಲಾವಿದರು ಉಜಿರೆ ನಾಟಕ ತಂಡ ಆರಿಕೋಡಿಯ ತಾಯಿ…

ಮಂಗಳೂರು ಬಂದರಿನಲ್ಲಿ ಸುಂಟರಗಾಳಿ – ಆಕಾಶದೆತ್ತರೆಕ್ಕೆ ಕಪ್ಪು ಮಿಶ್ರಿತ ಗಾಳಿ – ನ್ಯೂಸ್ ಫೋಕಸ್

ಮಂಗಳೂರು: ನವ ಮಂಗಳೂರು ಬಂದರು ಒಳಗಡೆ ಇಂದು ಸುಂಟರ ಗಾಳಿ ಕಾಣಿಸಿಕೊಂಡಿದೆ. ಪಣಂಬೂರುನಲ್ಲಿರುವ ನವ ಮಂಗಳೂರು ಬಂದರಿನಲ್ಲಿ ಕಲ್ಲಿದ್ದಲು ರಾಶಿ ಹಾಕಿರುವ‌ ಸ್ಥಳದಲ್ಲಿ ಭಾರೀ ಸುಂಟರಗಾಳಿ ಎದ್ದಿತ್ತು. ಕಪ್ಪು ಮಿಶ್ರಿತ ಮಣ್ಣಿನೊಂದಿಗೆ ನೆಲದಿಂದ ಆಕಾಶದೆತ್ತರಕ್ಕೆ ಸುಂಟರಗಾಳಿ ಹೋಗಿತ್ತು. ಬುಗುರಿ ತಿರುಗಿದಂತೆ ತಿರುಗಿದ…

ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಂಪ್ರೀತ ಎಸ್ ಶೆಟ್ಟಿಗಾರ್ ರ “ಅಂತರಾಳದ ಧ್ವನಿ” ಕೃತಿ ಬಿಡುಗಡೆ – ನ್ಯೂಸ್ ಫೋಕಸ್

ಶಿಬಾಜೆ : ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ ಬಿ ಸಿ ರೋಡ್ ನ ಸ್ಪರ್ಶ ಕಲಾಮಂದಿರದಲ್ಲಿ ನಡೆಯುತ್ತಿದ್ದು ಮಾರ್ಚ್ 27 ರಂದು ತುಳು ಮತ್ತು ಕನ್ನಡ ವಿದ್ವಾಂಸರು ವಿಶ್ರಾಂತ ಕುಲಪತಿಗಳು ಆಗಿರುವ ಪ್ರೊಫೆಸರ್ ಚಿನ್ನಪ್ಪ ಗೌಡರವರು ಹಲವಾರು…

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ – ನ್ಯೂಸ್ ಫೋಕಸ್

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಕ್ಕೆ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಆಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ಕುಂದಾಪುರದ ಹೆನ್ನಾಬೈಲಿನಲ್ಲಿ ಮಾ.26 ರ ರಾತ್ರಿ ಯಕ್ಷಗಾನ ಪ್ರದರ್ಶನ…

ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ– ನ್ಯೂಸ್ ಫೋಕಸ್

ಉಡುಪಿ: ಕರಾವಳಿ ಆರ್ಥಕತೆ ಜೀವಾಳವೇ ಮೀನುಗಾರಿಕೆ. ಮಧ್ಯಪ್ರಾಚ್ಯದ ಯುದ್ಧದ ಬಿಸಿ ಮೀನುಗಾರಿಕೆಗೂ ) ತಟ್ಟಿದೆ. ಕರಾವಳಿಯಲ್ಲಿ ಮೀನುಗಾರಿಕೆಗೆ ದೊಡ್ಡ ಸಂಕಷ್ಟ ಎದುರಾಗಿದೆ. ಡೀಸೆಲ್ ಕೊರತೆಯಿಂದಾಗಿ ಆಳ ಸಮುದ್ರ ಮೀನುಗಾರಿಕೆ ತೀವ್ರ ಆತಂಕಕ್ಕೆ ಒಳಗಾಗಿದೆ. ಪ್ರತಿದಿನ ಲಕ್ಷಾಂತರ ಲೀಟರ್ ಡೀಸೆಲ್ ಅವಲಂಬಿಸಿರುವ ಮೀನುಗಾರರು…

ಕಡಬ: ಮಾರ್ಚ್ 28ರಂದು ಪೋಲಿಸ್ ವಶದಲ್ಲಿರುವ ವಿವಿಧ ವಾಹನಗಳ ಬಹಿರಂಗ ಹರಾಜು – ನ್ಯೂಸ್ ಫೋಕಸ್

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ವಿವಿಧ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ ವಶಪಡಿಸಿಕೊಂಡು ವಿಲೇವಾರಿಯಾಗದೆ ಬಾಕಿ ಉಳಿದಿರುವ ಮೂರು ವಾಹನಗಳನ್ನು ಮಾರ್ಚ್ 28ರಂದು ಸಾರ್ವಜನಿಕವಾಗಿ ಹರಾಜು ಮಾಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹರಾಜು ನಡೆಯುವ ವಿವರ:…

ಶ್ರೀರಾಮ ವಿದ್ಯಾಲಯದಲ್ಲಿ ಪ್ರಗಲ್ಭ-ಪ್ರತಿಭೆಗಳ ಆತ್ಮವಿಶ್ವಾಸದ ಹೊಂಗಿರಣ 2025–26 ಬೇಸಿಗೆ ಶಿಬಿರಕ್ಕೆ ಭವ್ಯ ಚಾಲನೆ-ನ್ಯೂಸ್ ಫೋಕಸ್

ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ ಮಾರ್ಚ್ 23 ಸೋಮವಾರದಂದು ಮಾರ್ಚ್ 28 ರವರೆಗೆ ನಡೆಯಲಿರುವ ಪ್ರಗಲ್ಭ 2025–26 ಬೇಸಿಗೆ ಶಿಬಿರಕ್ಕೆ ಭವ್ಯ ಚಾಲನೆ ನೀಡಲಾಯಿತು. ಶಿಬಿರವು ವಿದ್ಯಾರ್ಥಿಗಳ ಭಕ್ತಿಭಾವಪೂರ್ಣ ಸರಸ್ವತಿ ವಂದನೆಯೊಂದಿಗೆ ಆರಂಭಗೊಂಡಿತು. ವಿದ್ಯಾಲಯದ ಆಡಳಿತ ಮಂಡಳಿಯ ಕೋಶಾಧಿಕಾರಿ ಶ್ರೀಯುತ ಜಿನ್ನಪ್ಪ…

14 ಕೆಜಿ ಬದಲಿಗೆ 10 ಕೆಜಿ ಎಲ್‌ಪಿಜಿ ಪೂರೈಕೆಗೆ ಕೇಂದ್ರ ಚಿಂತನೆ -ನ್ಯೂಸ್ ಫೋಕಸ್

ನವದೆಹಲಿ: ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ಆಮದುಗಳ ಮೇಲೆ ಪರಿಣಾಮ ಬೀರಿರುವುದರಿಂದ ಭಾರತ 10 ಕೆಜಿ ಎಲ್‌ಪಿಜಿ ಪೂರೈಕೆ ಯೋಜನೆ ಜಾರಿಗೆ ಮುಂದಾಗಿದೆ. ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು, ಮನೆಗಳಿಗೆ ಎಲ್‌ಪಿಜಿ ಮರುಪೂರಣ ಪ್ರಮಾಣವನ್ನು ಕಡಿಮೆ ಮಾಡುವ ಯೋಜನೆಯನ್ನು ಅನ್ವೇಷಿಸುತ್ತಿವೆ…

ಕಡಬ: ಕಣ್ಣೀರಿನಲ್ಲಿ ಮುಳುಗಿದ ಕುಟುಂಬ – ಕ್ಯಾನ್ಸರ್ ಪೀಡಿತನ ಚಿಕಿತ್ಸೆಗೆ ದಾನಿಗಳ ನೆರವಿನ ನಿರೀಕ್ಷೆ -ನ್ಯೂಸ್ ಫೋಕಸ್

ಅದು ನಿತ್ಯ ಕಣ್ಣೀರ ಕಡಲಲ್ಲೇ ತೇಲಾಡುತ್ತಿರುವ ಕುಟುಂಬ.. ನೆಮ್ಮದಿ ಅನ್ನೋದು ಈ ಕುಟುಂಬಕ್ಕೆ ಮರೀಚಿಕೆ. ಕುಟುಂಬಕ್ಕೆ ಆಸರೆಯಾಗಿದ್ದವರೆಲ್ಲ ಮನೆಯಲ್ಲೇ ಜೀವನ ಕಳೆಯುವಂತಾಗಿದ್ದು, ಒಂದಲ್ಲ ಒಂದು ಕಾಯಿಲೆಗೆ ತುತ್ತಾಗಿ ನರಕಯಾತನೆ ಅನುಭವಿಸುತ್ತಿದ್ದಾರೆ. ಅಷ್ಟಕ್ಕೂ ಇದು ಎಲ್ಲಿಯ ಕರುಣಾಜನಕ ಕಥೆ ಅಂತಿರಾ..ಈ ವರದಿ ನೋಡಿ…

ಕರಾವಳಿ ಮೀನುಗಾರರ ಮೇಲೂ ಯುದ್ಧದ ಕರಿಮೋಡ ಛಾಯೆ -ನ್ಯೂಸ್ ಫೋಕಸ್

ಉಡುಪಿ: ಇರಾನ್-ಅಮೆರಿಕ, ಇಸ್ರೇಲ್ ದೇಶಗಳ ನಡುವಿನಯುದ್ಧ ಪರಿಣಾಮ ಕರಾವಳಿ ಮೀನುಗಾರರಿಗೂ ತಟ್ಟುತ್ತಿದೆ. ಯುದ್ಧದಿಂದಾಗಿ ಮೀನು ರಫ್ತು ಸ್ಥಗಿತಗೊಂಡಿರುವುದು ಮಾತ್ರವಲ್ಲದೆ, ಗ್ಯಾಸ್ ಕೊರತೆಯಿಂದಾಗಿ ಹೊಟೇಲ್‌ಗಳು ಮುಚ್ಚಲ್ಪಡುತ್ತಿದ್ದು ಪರಿಣಾಮವಾಗಿ ಮೀನಿನ ದರದಲ್ಲಿ ಭಾರೀ ಕುಸಿತವಾಗಿದೆ ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ ಮೀನಿನ ದರದಲ್ಲಿ ಸುಮಾರು 50-200…

ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ– ನ್ಯೂಸ್ ಫೋಕಸ್

ಮೊಗ್ರು : ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಮಾ 23 ರಂದು ಬೆಳಗ್ಗೆ 7.45…

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ -ನ್ಯೂಸ್ ಫೋಕಸ್

ಉಡುಪಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು…

ಯಕ್ಷಗಾನ ರಂಗದ ದಿಗ್ಗಜ ಸೂರಿಕುಮೇರು ಗೋವಿಂದ ಭಟ್ ನಿಧನ – ನ್ಯೂಸ್ ಫೋಕಸ್

ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಯಕ್ಷಗಾನ ರಂಗದ ಶ್ರೇಷ್ಠ ಕಲಾವಿದ, ನಾಟ್ಯ ಗುರು ಮತ್ತು ದಶಾವತಾರಿ ಎಂದೇ ಖ್ಯಾತರಾದ ಸೂರಿಕಮೇರ್‌ ಕೆ.ಗೋವಿಂದ ಭಟ್ ಅವರು ಮಾ.20 ರಂದು ನಿಧನರಾದರು. ದಕ್ಷಿಣ ಕನ್ನಡದ ಬಂಟ್ವಾಳದವರಾದ ಇವರು…

ಪ್ರಶಾಂತ್ ಇಲೆಕ್ಟ್ರಿಕಲ್ ನವರಿಂದ ಮನೆಗೆ ಉಚಿತ ವಿದ್ಯುತ್ ವಯರಿಂಗ್ ಸೌಲಭ್ಯ- ನ್ಯೂಸ್ ಫೋಕಸ್

ಚಿಕ್ಕಮೂಡ್ನೂರು ಗ್ರಾಮದ ಬೀರ್ನಹಿತ್ಲುನಲ್ಲಿ ತೀರಾ ಬಡತನದಲ್ಲಿ ಇರುವ ಕೊರಗಪ್ಪ ಇವರ ಮನೆಯು 6 ವರುಷಗಳ ಹಿಂದೆ ಕಾಮಗಾರಿ ಅರ್ದಕ್ಕೆ ನಿಂತಿದ್ದು ಈ ಮನೆಯ ನಿರ್ಮಾಣ ಕಾರ್ಯವನ್ನು ಸ್ಥಳೀಯಶ್ರೀ ವಿಷ್ಣು ಯುವಕ ಮಂಡಲದ ಕೆಮ್ಮಾಯಿ ಇವರು ವಹಿಸಿಕೊಂಡಿದ್ದು ಈ ಮನೆಗೆಪ್ರಶಾಂತ್ ಇಲೆಕ್ಟ್ರಿಕಲ್ ಬೊಳುವಾರು…

ಚಿಕ್ಕಮಗಳೂರು | ಹೊತ್ತಿ ಉರಿಯುತ್ತಿದೆ ಶೋಲಾರಣ್ಯ – 25ಕ್ಕೂ ಹೆಚ್ಚು ಕಡೆಗಳಲ್ಲಿ ಕಾಣಿಸಿಕೊಂಡ ಬೆಂಕಿ-ನ್ಯೂಸ್ ಫೋಕಸ್

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ ವಲಯದ ಮಾಣಿಕ್ಯಬೆಟ್ಡ, ವಾಲೀಕುಂಜಗಿರಿ ಸಾಲಿನ 25ಕ್ಕೂ ಹೆಚ್ಚು ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ…

ಬಂಟ್ವಾಳ : ಮನೆಯ ಅಂಗಳಕ್ಕೆ ಬಂದ ಬೃಹತ್ ಗಾತ್ರದ ಮೊಸಳೆ – ನ್ಯೂಸ್ ಫೋಕಸ್

ಬಂಟ್ವಾಳ : ನೇತ್ರಾವತಿ ನದಿ ತೀರದಲ್ಲಿರುವ ಮನೆಯ ಅಂಗಳಕ್ಕೆ ಬೃಹತ್ ಗಾತ್ರದ ಮೊಸಳೆಯೊಂದು ಎಂಟ್ರಿ ಕೊಟ್ಟಿದೆ. ನೇತ್ರಾವತಿ ತೀರದಿಂದ ಸುಮಾರು 200 ಮೀ ದೂರದಲ್ಲಿರುವ ನೆಕ್ಕಿಲಾರು ರಾಜೇಶ್ ನಾಯಕ್ ಎಂಬವರ ಮನೆಯ ಅಂಗಳಕ್ಕೆ ಸುಮಾರು 7 ಅಡಿ ಉದ್ದದ ಮೊಸಳೆ ಬಂದಿರೋದು…

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 7 ಮರಿಗಳ ತಾಯಿಯಾದ ಭಾರತೀಯ ತೋಳ “ಗೀತಾ” : ಭಾರತೀಯ ತೋಳಗಳ ಸಂತಾನೋತ್ಪತ್ತಿಯಲ್ಲಿ ಹೊಸ ಮೈಲಿಗಲ್ಲು – ನ್ಯೂಸ್ ಫೋಕಸ್

ಮಂಗಳೂರು : ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಸಂತಸದ ವಾತಾವರಣ ಮನೆಮಾಡಿದೆ. ಇಲ್ಲಿನ ‘ಗೀತಾ’ ಎಂಬ ಹೆಸರಿನ ಭಾರತೀಯ ತೋಳ (Indian Wolf) ಒಂದೇ ಬಾರಿಗೆ ಏಳು ಮರಿಗಳಿಗೆ ಜನ್ಮ ನೀಡುವ ಮೂಲಕ ಗಮನ ಸೆಳೆದಿದೆ. ಜನಿಸಿದ ಏಳು ಮರಿಗಳಲ್ಲಿ…

ಚೀನಾಗೆ ತೆರಳುತ್ತಿದ್ದ ರಷ್ಯಾ ತೈಲ ಟ್ಯಾಂಕರ್‌ ಸಮುದ್ರ ನಡುವೆ ಮಂಗಳೂರಿನ ಕಡೆಗೆ ಯೂಟರ್ನ್‌– ನ್ಯೂಸ್ ಫೋಕಸ್

ಮಂಗಳೂರು : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ದಿಢೀರ್ ಬೆಳವಣಿಗೆಯೊಂದು ನಡೆದಿದ್ದು, ರಷ್ಯಾದಿಂದ ಚೀನಾಕ್ಕೆ ಕಚ್ಚಾ ತೈಲ ಹೊತ್ತು ಸಾಗುತ್ತಿದ್ದ ಬೃಹತ್ ಟ್ಯಾಂಕರ್ ಹಡಗು ಮಾರ್ಗ ಮಧ್ಯದಲ್ಲೇ ಪಥ ಬದಲಿಸಿದೆ. ಅರಬ್ಬಿ ಸಮುದ್ರದಲ್ಲಿ ‘ಯೂ-ಟರ್ನ್’ ಪಡೆದಿರುವ ಈ ನೌಕೆಯು ಈಗ ಮಂಗಳೂರು ಬಂದರಿನತ್ತ…

ಮಂಗಳೂರಿಗೆ ಬರಲಿದೆ 26,000 ಟನ್‌ LPG ತೈಲ ಹೊತ್ತ ‘ಶಿವಾಲಿಕ್’ ಹಡಗು– ನ್ಯೂಸ್ ಫೋಕಸ್

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಉದ್ವಿಗ್ನತೆಯಿಂದಾಗಿ ಎದುರಾಗಿದ್ದ ಅಡುಗೆ ಅನಿಲ ಪೂರೈಕೆ ವ್ಯತ್ಯಯದ ಆತಂಕಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (ಎಲ್‌ಪಿಜಿ) ಹೊತ್ತ ‘ಶಿವಾಲಿಕ್’ ಹಡಗು ಯುದ್ಧ ಪೀಡಿತ ಹೊರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ…

ಪುತ್ತೂರು: ಗಾಳಿ ಮಳೆಗೆ ದಾರ ಕಡಿದು ನೆಲಕ್ಕೆ ಬಿದ್ದ ರಾಷ್ಟ್ರಧ್ವಜ – ನ್ಯೂಸ್ ಫೋಕಸ್

ಪುತ್ತೂರು : ಇಂದು ರಾತ್ರಿ ಸುರಿದ ಗಾಳಿ ಮಳೆಗೆ ನೆಲ್ಲಿಕಟ್ಟೆಯಲ್ಲಿ ಇತ್ತೀಚೆಗೆ ಧ್ವಜಾರೋಹಣಗೊಂಡ ರಾಜ್ಯದ 3ನೇ ಅತೀ ದೊಡ್ಡ ರಾಷ್ಟ್ರಧ್ವಜ ಭೂಸ್ಪರ್ಶಗೊಂಡಿದೆ. ಈ ವರ್ಷ ಸುರಿದ ಮೊದಲ ಮಳೆಗೆ ಈ ಘಟನೆ ನಡೆದಿದೆ.

ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಪುತ್ತೂರಿನಾದ್ಯಂತ ಗುಡುಗು ಸಹಿತ ಭಾರೀ ಗಾಳಿ ಮಳೆ – ನ್ಯೂಸ್ ಫೋಕಸ್

ಬಿಸಿಲ ಬೇಗೆಯಿಂದ ಬಳಲುತ್ತಿದ್ದ ಪುತ್ತೂರಿನಾದ್ಯಂತ ಗುಡುಗು ಸಹಿತ ಭಾರೀ ಮಳೆ-ಗಾಳಿ ಬೀಸಿದೆ. ಏಕಾಏಕಿ ಸುರಿದ ಮಳೆಯಿಂದಾಗಿ ವಾಹನ ಸವಾರರು ಮತ್ತು ಜನ ಕೊಂಚ ಗಲಿಬಿಲಿಗೊಂಡಿದ್ದು, ಮಳೆಯಲ್ಲೇ ತಮ್ಮ ಮನೆ, ಉದ್ಯೋಗದ ಸ್ಥಳವನ್ನು ಸೇರುವಂತಾಗಿದೆ. ಒಮ್ಮೆಲೇ ಸುರಿದ ಮಳೆಯಿಂದಾಗಿ ಬಿಸಿಲಿಗಾಗಿ ಹಾಕಿದ ಅಡಿಕೆಯೂ…

ಉಡುಪಿ ಪುತ್ತೂರಿನ ಮಾಯಾ ಗುಂಡಿಗೆ ಹಾರಲು ಯತ್ನಿಸಿದ ವ್ಯಕ್ತಿಯ ರಕ್ಷಣೆ : ಆಸ್ಪತ್ರೆಗೆ ದಾಖಲು – ನ್ಯೂಸ್ ಫೋಕಸ್

ಉಡುಪಿ : ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರಿನ ಮಾಯಾಗುಂಡಿ ಎಂಬಲ್ಲಿರುವ ನೀರಿನ ಗುಂಡಿಗೆ ಹಾರಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಭಾನುವಾರ ಮುಂಜಾನೆ ರಕ್ಷಿಸಲಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಗುಂಡಿಗೆ ಹಾರಲು ಯತ್ನಿಸುತ್ತಿರುವುದನ್ನು ಗಮನಿಸಿದ ಸ್ಥಳೀಯ ಸಮಾಜ ಸೇವಕ ವಿಶು…

ತುಳುನಾಡಿನಲ್ಲೇ ದೈವಕ್ಕೆ ಅಪಚಾರ? ಕ್ರಿಶ್ಚಿಯನ್ ಹುಡುಗನಿಂದ ದೈವ ನರ್ತನ ಆರೋಪ – ನ್ಯೂಸ್ ಫೋಕಸ್

ಮಂಗಳೂರು: ತುಳುನಾಡಿನ ಪ್ರಸಿದ್ಧ ದೈವಾರಾಧನೆಯ ದೈವ ನರ್ತನ ಇದೀಗ ಭಾರೀ ವಿವಾದದಕ್ಕೆ ಕಾರಣವಾಗಿದೆ. ಮಂಗಳೂರಿನ ಪ್ರಸಿದ್ಧ ದೈವಸ್ಥಾನದಲ್ಲಿ ನಡೆದ ನೇಮೋತ್ಸವದ ವೇಳೆ ಬಂಟ ದೈವಕ್ಕೆ ಕ್ರೈಸ್ತ ಧರ್ಮದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಘಟನೆ…

ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ – ನ್ಯೂಸ್ ಫೋಕಸ್

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಶಾಲೆಗಳ ‘ಪಿ.ಎಂ ಪೋಷಣ್’ (ಬಿಸಿಯೂಟ) ಯೋಜನೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತು ಶಾಲಾ…

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಕು. ಚೈತ್ರಾ ರವರಿಗೆ ಗಾಲಿಕುರ್ಚಿ ವಿತರಣೆ – ನ್ಯೂಸ್ ಫೋಕಸ್

ಸೌತಡ್ಕ(ಮಾ.12): ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ…

ಬಂದಾರು ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

ಬಂದಾರು :ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಮಾ 11 ರಂದು ಅಂಡೆಕೇರಿ ಬದ್ರಿಯಾ ಜುಮಾ ಮಸೀದಿಯವರರು ಶುದ್ಧ ನೀರಿನ ಘಟಕದ ಕೊಡುಗೆ ನೀಡಿ ಶಾಲಾ ವಠಾರದಲ್ಲಿ ಹಸ್ತಾoತರಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ…

ಪುತ್ತೂರಿನಲ್ಲೂ ಸಿಲಿಂಡರ್ ಗಾಗಿ ಮುಗಿಬಿದ್ದ ಜನತೆ – ನ್ಯೂಸ್ ಫೋಕಸ್

ಪುತ್ತೂರು: ಇರಾನ್ ಇಸ್ರೇಲ್ ಅಮೆರಿಕಾ ಸಂಘರ್ಷದಿಂದ ಉಂಟಾದ ಜಾಗತಿಕ ಎಲ್‌ಪಿಜಿ (ಅಡುಗೆ ಅನಿಲ) ಪೂರೈಕೆಯಲ್ಲಿ ಅಡಚಣೆಯಿಂದ ಪುತ್ತೂರಿನಲ್ಲಿ ಗ್ಯಾಸ್ ಸಿಲಿಂಡರ್‌ಗಳ ಕೊರತೆ ತೀವ್ರವಾಗಿದೆ. ಗಾಸಿಪ್ ಗಳನ್ನು ನಂಬಿ ಮನೆಗಳಿಗೆ ಸಿಲಿಂಡ‌ರ್ ತರಲು ಜನರು ಏಜೆನ್ಸಿಗಳ ಬಳಿ ಮುಗಿಬಿದ್ದು. ದೀರ್ಘ ಸರತಿ ಸಾಲುಗಳು…

ಕಾಸರಗೋಡು ಗೋ- ಕುಟೀರದ ನೀಲ ನಕ್ಷೆ ರಚಿಸಿದ, ಖ್ಯಾತ ಕಲಾವಿದ ರಂಗ ನಿರ್ದೇಶಕ ಕಿರಣ್ ಕಲಾಂಜಲಿ ಕೂಡ್ಲು – ನ್ಯೂಸ್ ಫೋಕಸ್

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ” ಕಟ್ಟಡದ ಸಮಗ್ರವಾದ ನೀಲ ನಕ್ಷೆ (ಬ್ಲೂಪ್ರಿಂಟ್) ಯನ್ನು ಖ್ಯಾತ ಕಲಾವಿದ, ರಂಗ ನಿರ್ದೇಶಕ, ಕಿರಣ್ ಕಲಾಂಜಲಿ…

ವಿಶ್ವ ಹಿಂದೂ ಪರಿಷದ್‌ ಪ್ರಾಂತ ಕಾರ್ಯದರ್ಶಿ ಸುರೇಶ್ ದಿ. ಸುಧೀರ್ ಮನೆಗೆ ಭೇಟಿ – ನ್ಯೂಸ್ ಫೋಕಸ್

ವಿಶ್ವ ಹಿಂದೂ ಪರಿಷದ್‌ ಪ್ರಾಂತ ಕಾರ್ಯದರ್ಶಿಗಳಾದ ಸುರೇಶ್ ಇವರು ಇಂದು ಇತ್ತೀಚೆಗೆ ಆಕಾಲಿಕ ಮರಣ ಹೊಂದಿದ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖರಾಗಿದ್ದ ಸುಧೀರ್ ತೆಕ್ಕಾರು ಇವರ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್…

ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ಚಿದಾನಂದ ಗೌಡರಿಗೆ ಶಾಸಕ ಹರೀಶ್ ಪೂಂಜಾ ಮತ್ತು ಗ್ರಾಮಸ್ಥರಿಂದ ಅಂತಿಮ ನಮನ – ನ್ಯೂಸ್ ಫೋಕಸ್

ಬಂದಾರು : ಮಾ 08 ಬಂದಾರು ಗ್ರಾಮ ಕುರಾಯ ನಿವಾಸಿ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ಚಿದಾನಂದ ಗೌಡ (56.ಪ್ರಾಯ )ರವರು ಮಾರ್ಚ್ 08 ರಂದು ಬೈಕ್ ನಲ್ಲಿ ಸಂಚಾರಿಸುವಾಗ ಉಪ್ಪಿನಂಗಡಿಯಲ್ಲಿ ನಡೆದ ಅಪಘಾತದಲ್ಲಿ ತೀವ್ರತರನಾಗಿ ಗಾಯಗೊಂಡು ಹೆಚ್ಚಿನ…

ಬೆಳ್ತಂಗಡಿ ಮರೋಡಿ ರಸ್ತೆಯ ಶಿಲನ್ಯಾಸ ಕಾರ್ಯಕ್ರಮ – ನ್ಯೂಸ್ ಫೋಕಸ್

ಮರೋಡಿ : ಮಾ 07 ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ರೂ. 17.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಮಾ 07 ರಂದು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿಮಾಜಿ…

ದಕ್ಷಿಣ ಕನ್ನಡದಲ್ಲಿ 2 ನೂತನ ಪೊಲೀಸ್‌ ಠಾಣೆಗಳಿಗೆ ಪ್ರಸ್ತಾವನೆ – ನ್ಯೂಸ್ ಫೋಕಸ್

ಮಂಗಳೂರು: ದಕ್ಷಿಣ ಕನ್ನಡ ಪೊಲೀಸ್ ಘಟಕದಲ್ಲಿ ನೂತನವಾಗಿ ಕಾರ್ಯಾರಂಭಗೊಳ್ಳಲಿರುವ ಎರಡು ಪೊಲೀಸ್ ಠಾಣೆಗಳ ವ್ಯಾಪ್ತಿ ಪ್ರದೇಶಗಳನ್ನು ಸಂಯೋಜಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಯ ಪ್ರಕಾರ ಸಜಿಪನಡು ಪೊಲೀಸ್‌ ಠಾಣೆ ಮತ್ತು ಮಾಣಿ ಪೊಲೀಸ್ ಠಾಣೆ ಎಂಬ ಎರಡು ಹೊಸ ಠಾಣೆಗಳು…

ಅಲೆಕ್ಕಿ, ಮುಗೇರಡ್ಕ, ಶ್ರೀರಾಮ ಶಿಶುಮಂದಿರಕ್ಕೆ ಉದ್ಯಮಿಗಳಾದ ಶ್ರೀ ಹರ್ಷ ಮೇಲಾoಟ ಮೊಗರೋಡಿ ಭೇಟಿ – ನ್ಯೂಸ್ ಫೋಕಸ್

ಮೊಗ್ರು: ಮಾ 06 ಮೊಗ್ರು ಗ್ರಾಮದ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ – ಮುಗೇರಡ್ಕ, ಶ್ರೀರಾಮ ಶಿಶುಮಂದಿರಕ್ಕೆ ಉದ್ಯಮಿಗಳಾದ ಶ್ರೀ ಹರ್ಷ ಮೇಲಾoಟ ಮೊಗರೋಡಿ ಇವರು ಮಾರ್ಚ್ 06 ರಂದು ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿ,ಶಿಶು ಮಂದಿರದ ಮಕ್ಕಳಿಗೆ…

ಆರಂಭವಾಗಿದೆ ಮಾವಿನ ಮಿಡಿಗಳ ಸೀಸನ್ -ನ್ಯೂಸ್ ಫೋಕಸ್

ಪುತ್ತೂರು: ಮಾವಿನ ಹಣ್ಣಿನ ಸೀಸನ್ ಆರಂಭಗೊಳ್ಳುವ ಮೊದಲೇ ಮಾವಿನ ಮಿಡಿಗಳು ಗ್ರಾಹಕರನ್ನು ಆಕರ್ಷಿಸಲು ಆರಂಭಿಸಿವೆ. ಅದರಲ್ಲೂ ಉಪ್ಪಿನಕಾಯಿ ಹಾಕಲೆಂದೇ ಇರುವ ಕೆಲವು ಮಾವಿನ ಮಿಡಿಗಳಿದ್ದು, ಈ ಮಿಡಿಗಳಿಗೆ ಇದೀಗ ಭಾರೀ ಬೇಡಿಕೆಯೂ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾವಿನ ಉಪ್ಪಿನಕಾಯಿ…

ಮಾರ್ಚ್ 6 ರಂದು ಪುತ್ತೂರಿನಲ್ಲಿ ನೂತನವಾಗಿ ಶುಭಾರಂಭಗೊಳ್ಳಲಿರುವ ಮಚ್ಚಿಮಲೆ ಲೀಗಲ್ ಸೊಲ್ಯೂಷನ್ಸ್ – ನ್ಯೂಸ್ ಫೋಕಸ್

ಪುತ್ತೂರು : ಪುತ್ತೂರಿನ ಖ್ಯಾತ ನ್ಯಾಯವಾದಿಗಳಾದ ಮಚ್ಚಿಮಲೆ ವಿರೂಪಾಕ್ಷ ಭಟ್ ರವರ ನೂತನ ಕಛೇರಿ ಮಚ್ಚಿಮಲೆ ಲೀಗಲ್ ಸೊಲ್ಯೂಷನ್ಸ್ ಮಾರ್ಚ್ 6 ರಂದು ಸರಕಾರಿ ನೌಕರರ ಸಮುದಾಯ ಭವನದ ನೆಲಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ. ಹಲವು ಗಣ್ಯರ ಉಪಸ್ಥಿತಿಯಲ್ಲಿ ನೂತನ ಕಛೇರಿ ಶುಭಾರಂಭಗೊಳ್ಳಲಿದೆ.

ಕರಾವಳಿ ರೈತರ ಬೆಳೆ ರಕ್ಷಣೆಗೆ ‘ಆನೆ ಕಾರ್ಯಪಡೆ’ ಮಂಜೂರು: ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಸತತ ಹೋರಾಟಕ್ಕೆ ಬೃಹತ್ ಜಯ – ನ್ಯೂಸ್ ಫೋಕಸ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಭಾಗದ ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಪಂಜ ಮತ್ತು ಸುಬ್ರಹ್ಮಣ್ಯ ವಲಯಗಳ ವ್ಯಾಪ್ತಿಯಲ್ಲಿ ಮಿತಿಮೀರುತ್ತಿರುವ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಕೊನೆಗೂ ಪ್ರತ್ಯೇಕ ‘ಆನೆ ಕಾರ್ಯಪಡೆ’ (Elephant Task Force) ಯನ್ನು ರಚಿಸಿ ಅಧಿಕೃತ…

ಪುತ್ತೂರು : ಪದೇ ಪದೇ ನೆಲಮಟ್ಟದಲ್ಲಿ ಜೆಟ್ ವಿಮಾನ ಹಾರಾಟ- ನ್ಯೂಸ್ ಫೋಕಸ್

ಪುತ್ತೂರು : ಜೆಟ್ ವಿಮಾನವೊಂದು ಹಲವು ಬಾರಿ ಭೂಮಿ ಮಟ್ಟಕ್ಕೆ ಅತೀ ಸಮೀಪದಲ್ಲಿ ಹಾರಾಟ ನಡೆಸುತ್ತಿದ್ದ ದೃಶ್ಯ ಪುತ್ತೂರು ನಗರದಲ್ಲಿ ಕಂಡು ಬಂದಿದ್ದು ಏನಿದು ಎಂಬ ಆತಂಕ ಮೂಡಿದ ಬೆನ್ನಲ್ಲೇ ಇದು ಭೂ ವಿಜ್ಞಾನಕ್ಕೆ ಸಂಬಂಧಿಸಿದ ಸರ್ವೇ ಕಾರ್ಯ ಎಂದು ತಿಳಿದು…

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ 8 ಸೆಂಟ್ಸ್ ಜಾಗ ಸ್ವಾಧೀನ – ನ್ಯೂಸ್ ಫೋಕಸ್

ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿ ನೆಲ್ಲಿಕಟ್ಟೆಯಲ್ಲಿದ್ದ ಸುಮಾರು 1.20 ಕೋಟಿ ರೂ.ಮೌಲ್ಯದ 8 ಸೆಂಟ್ಸ್ ಜಾಗವನ್ನು ಫೆ.28ರಂದು ದೇವಳದ ಸ್ವಾಧೀನಕ್ಕೆ ಪಡೆಯಲಾಗಿದೆ. ನೆಲ್ಲಿಕಟ್ಟೆಯಲ್ಲಿರುವ ಅಶ್ವತ್ಥಕಟ್ಟೆಯ ಹಿಂಬದಿಯಲ್ಲಿ ವಾಲ್ಟರ್ ಲೋಬೋ ಎಂಬವರ ಸ್ವಾಧೀನದಲ್ಲಿದ್ದ ದೇವಳಕ್ಕೆ ಸಂಬಂಧಿಸಿದ 8…

ಇಂದು ಪುತ್ತೂರಿನ ಹಲವೆಡೆ ವಿದ್ಯುತ್ ನಿಲುಗಡೆ – ನ್ಯೂಸ್ ಫೋಕಸ್

ಪುತ್ತೂರು: ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಹಲವು ಫೀಡರ್‌ಗಳಲ್ಲಿ ಫೆಬ್ರವರಿ 26 ರಂದು ಬೆಳಿಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಕಬಕ ನಗರ, ಬನ್ನೂರು, ಕೊಡಿಪ್ಪಾಡಿ, ಪಡ್ನೂರು,…

ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ಅನಾರೋಗ್ಯದಿಂದ ನಿಧನ – ನ್ಯೂಸ್ ಫೋಕಸ್

ಉಪ್ಪಿನಂಗಡಿ: ಇಲ್ಲಿನ ರಾಮ ಲಕ್ಷ್ಮಣ ಆರ್ಕೆಡ್‌ನ ಮಾಲಕ, ಕ್ಲಾಸಿಕ್ ಮೆನ್ಸ್ ವೇರ್ ಟೈಲರಿಂಗ್ ಸಂಸ್ಥೆಯ ಮಾಲಕರೂ ಆಗಿದ್ದು ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಯು. ಕೆ. ರೋಹಿತಾಕ್ಷ (47) ರವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಫೆ.24ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.…

ಪುತ್ತೂರು: ಫೆಬ್ರವರಿ 22 ರಂದು ವಿಜೃಂಭಣೆಯಿಂದ ನಡೆದ ಗೌಡ್ರ ಕಪ್ ಸೀಸನ್ – 2 ಕ್ರಿಕೆಟ್ ಪಂದ್ಯಾಟ – ನ್ಯೂಸ್ ಫೋಕಸ್

ಪುತ್ತೂರು : ಫೆಬ್ರವರಿ 22 ರಂದು ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಗೌಡ್ರ ಕಪ್ ಸೀಸನ್ 2 ನೆರವೇರಿತು. ಬೆಳಗ್ಗೆ 8 ಗಂಟೆಗೆ ಸರಿಯಾಗಿ 10 ಆಯ್ದ ತಂಡಗಳ ಪಂದ್ಯಾಟವು ಆರಂಭವಾಗಿ ಸಂಜೆ 7 ಗಂಟೆಗೆ ಸಮಾರೋಪದೊಂದಿಗೆ ಸಂಪನ್ನಗೊಂಡಿತು. ಈ ಕಾರ್ಯಕ್ರಮದ ಮುಖ್ಯ…

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ – ನ್ಯೂಸ್ ಫೋಕಸ್

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಳಿಗಾಲ ಮುಗಿದು ಇನ್ನೇನು ಬೇಸಿಗೆ ಕಾಲ ಆರಂಭವಾಗುತ್ತಿದ್ದು, ಈಗಾಗಲೇ ತಾಪಮಾನದಲ್ಲಿ ಏರಿಕೆ ಕಾಣುತ್ತಿದೆ. ಹೀಗಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಬಾರಿ…

ಪುತ್ತೂರು: ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು – ನ್ಯೂಸ್ ಫೋಕಸ್

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಆಯೋಜನಗೊಂಡಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ನಡೆಯುತ್ತಿದ್ದ ಕಟ್ಟಡದ ಮೇಲಂತಸ್ತಿನಲ್ಲಿ ಮುಳ್ಳು ಹಂದಿಯೊಂದು ಪತ್ತೆಯಾಗಿ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಸುರಕ್ಷಿತವಾಗಿ ಹಿಡಿಯುವ ಪ್ರಯುತ್ನದಲ್ಲಿದ್ದಾಗ ಗಾಬರಿಯಿಂದ ಓಡಿದ ಹಂದಿ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಫೆ.21ರಂದು…

ಉರುವಾಲು ಗ್ರಾಮ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2.50ಲಕ್ಷ ಡಿ ಡಿ ಹಸ್ತಾಂತರ – ನ್ಯೂಸ್ ಫೋಕಸ್

ಉರುವಾಲು: ಫೆ 20. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುರುವಾಯನಕೆರೆ ತಾಲೂಕು, ಕಣಿಯೂರು ವಲಯದ ಉರುವಾಲು ಗ್ರಾಮದ ಕಾರಿಂಜ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ 2.50ಲಕ್ಷದ…

ಪುತ್ತೂರು- ಉಪ್ಪಿನಂಗಡಿ ಚತುಷ್ಪಥ:ಸಮರೋಪಾದಿಯಲ್ಲಿ ಕಾಮಗಾರಿ ಮುಗಿಸಿ: ಶಾಸಕರ ಸೂಚನೆ – ನ್ಯೂಸ್ ಫೋಕಸ್

ಪುತ್ತೂರು: ಪುತ್ತೂರು – ಉಪ್ಪಿನಂಗಡಿ ಚತುಷ್ಫಥ ಕಾಮಗಾರಿಯನ್ನು ಸಮರೋಪಾದಿಯಲ್ಲಿ ಮುಗಿಸುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದು ಅದರಂತೆ ಇಂದಿನಿಂದ ಕಾಮಗಾರಿ ವೇಗತೆಯನ್ನು ಪಡೆದುಕೊಂಡಿದೆ. ಮುಂದಿನ ಮಳೆಗಾಲಕ್ಕೆ ಮುನ್ನ ಕಾಮಗಾರಿ ಮುಗಿಸಬೇಕು ಮತ್ತು ತಡೆಗೋಡೆ,ಮೋರಿ ಅಗತ್ಯವಿದ್ದ ಕಡೆ ನಿರ್ಮಾಣ‌ಮಾಡಿ‌ಮುಗಿಸಬೇಕು. ಮಳೆ ಯಾವಾಗ…

ಪುತ್ತೂರು ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ -ನ್ಯೂಸ್ ಫೋಕಸ್

ಯು.ಆರ್ ಪ್ರಾಪರ್ಟಿಸ್‌ ಮಾಲಕ ಉಜ್ವಲ್ ಪ್ರಭು ಕೊಡುಗೆ, ನಿರ್ವಹಣೆಸಹಾಯಕ ಆಯುಕ್ತರಿಂದ ಶಿಲಾನ್ಯಾಸ ಪುತ್ತೂರು: ಪಕ್ಷಿ ಸಂಕುಲವನ್ನು ರಕ್ಷಿಸಿ, ಉಳಿಸುವ ನಿಟ್ಟಿನಲ್ಲಿ ಪುತ್ತೂರಿನ ತಾಲೂಕು ಆಡಳಿತ ಸೌಧದ ವತಿಯಿಂದ ‘ಪಕ್ಷಿಗಳ ಆಶ್ರಯದಾಮ’ ನಿರ್ಮಾಣವಾಗಲಿದೆ. ಆಡಳಿತ ಸೌಧದ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ ವಿವಿಧ ಜಾತಿಯ…

ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ – ನ್ಯೂಸ್ ಫೋಕಸ್

ದುಬೈ: ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ಆಯೋಜಿಸಲಾಗಿದ್ದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟವು ಫೆಬ್ರವರಿ 15 ರಂದು ದುಬೈನಲ್ಲಿ ಅತ್ಯಂತ ವೈಭವದಿಂದ ಜರುಗಿತು. ಈ ಬಾರಿಯ ಕ್ರೀಡಾಕೂಟದ…

ಫೆಬ್ರವರಿ 21 ರಂದು ಪುತ್ತೂರಿನಲ್ಲಿ ಉದ್ಯೋಗ ಮೇಳ – ನ್ಯೂಸ್ ಫೋಕಸ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ , DAY NRLM-DDUGKY ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರ ಆಶ್ರಯದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ 2026 ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್…

ಬೆಳ್ತಂಗಡಿ: ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು – ನ್ಯೂಸ್ ಫೋಕಸ್

ಬೆಳ್ತಂಗಡಿ : ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರ ಹಚ್ಚಿದ ಪ್ರಕರಣಕ್ಕೆ ಸಂಬಂದಿಸಿದ್ದತೆ ನಕ್ಸಲ್ ಮಹೇಶ್ @ಜಯಣ್ಣ@ಜಾನ್ (49) ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಫೆ.19 ರಂದು ಗುರುವಾರ ಹಾಜರುಪಡಿಸಲಾಯಿತು. ಕೇರಳ ರಾಜ್ಯದ ತ್ರಿಶೂರ್ ಜೈಲಿನಿಂದ ಬಂಧಿತ ನಕ್ಸಲ್ ಮಹೇಶ್@ಜಯಣ್ಣ@ಜಾನ್ ಅವರನ್ನು…

ಶ್ರೀರಾಮ ವಿದ್ಯಾಲಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ – ನ್ಯೂಸ್ ಫೋಕಸ್

ಶ್ರೀ ರಾಮ ವಿದ್ಯಾಲಯ ಸೂರ್ಯ ನಗರ ನೆಲ್ಯಾಡಿಯಲ್ಲಿ ಫೆಬ್ರವರಿ 18 ಬುಧವಾರದಂದು ಅಶ್ವಿನಿ ಆಸ್ಪತ್ರೆ ನೆಲ್ಯಾಡಿ ಇದರ ಸಹಯೋಗದೊಂದಿಗೆ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ಡಾ| ರವಿಶಂಕರ್ ಎಂ. ಶ್ರೀ ದುರ್ಗಾ ಕ್ಲಿನಿಕ್ ನೆಲ್ಯಾಡಿ ಇವರು…

ಆಡಳಿತ ಅವಧಿ ಪೂರ್ಣಗೊಂಡ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ – ನ್ಯೂಸ್ ಫೋಕಸ್

ಬಂದಾರು 🙁 ಫೆ.13) 2021-26 ಸಾಲಿನವರೆಗೆ ಐದು ವರ್ಷಗಳ ಕಾಲ ಬಂದಾರು ಗ್ರಾಮ ಪoಚಾಯತ್ ಆಡಳಿತ ಮಂಡಳಿಯ ಅಭಿವೃದ್ಧಿ ಕಾರ್ಯದಲ್ಲಿ ಸಹಕರಿಸಿದ ಪಂಚಾಯತ್ ಅಧ್ಯಕ್ಷರು,ಉಪಾಧ್ಯಕ್ಷರು, ಸರ್ವ ಸದಸ್ಯರುಗಳನ್ನು ಗೌರವ ಪೂರ್ಣ ಅಭಿನಂದನೆ ಸಲ್ಲಿಸಿ, ಬೀಳ್ಕೊಡಲಾಯಿತು. ಇದೇ ಸಂದರ್ಭದಲ್ಲಿ ಆಡಳಿತ ಮಂಡಳಿಗೆ ಸಹಕಾರ…

ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣದ ಪೂರ್ವತಯಾರಿ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕ ಹರೀಶ್ ಪೂಂಜಾ – ನ್ಯೂಸ್ ಫೋಕಸ್

ಪದ್ಮುಂಜ: ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿಗಳನ್ನು ವೀಕ್ಷಿಸಿ, ಸಲಹೆ ಸೂಚನೆ ನೀಡಿದರು .…

ಫೆ.15ರಂದು‌ ವರ್ತಕರ ಸಂಘ ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿ ಪುರುಷರಕಟ್ಟೆ, ಪುತ್ತೂರು ದ.ಕ. (VSNP) ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ – ನ್ಯೂಸ್ ಫೋಕಸ್

ಪುತ್ತೂರು: ವರ್ತಕರ ಸಂಘ ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿ ಪುರುಷರಕಟ್ಟೆ, ಪುತ್ತೂರು ದ.ಕ. (VSNP) ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಕಾರ್ಯಕ್ರಮವು ಫೆ.15ರಂದು‌ ನರಿಮೊಗರು ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ. ವರ್ತಕರ ಸಂಘದ ನಿಯೋಜಿತ ಅಧ್ಯಕ್ಷರಾದ ನವೀನ್ ಪ್ರಭು…

ಕಾಪು ಪುರಸಭೆ ಕಟ್ಟಡಕ್ಕೆ ಬೀಗ ಹಾಕಿ ಹೋದ ನೌಕರ: ಸಿಬ್ಬಂದಿ ಒಳಗೆಯೇ ಲಾಕ್ – ನ್ಯೂಸ್ ಫೋಕಸ್

ಉಡುಪಿ: ಪುರಸಭೆ ಸಿಬ್ಬಂದಿಯ ಅಚಾತುರ್ಯದಿಂದಾಗಿ ಪ್ರಾಧಿಕಾರದ ಸಿಬ್ಬಂದಿಗಳು ಕಚೇರಿಯೊಳಗೆ ದಿಗ್ಬಂಧನ ಒಳಗಾದ ಘಟನೆ ಕಾಪುವಿನಲ್ಲಿ ನಡೆದಿದೆ. ಕಾಪು ಪುರಸಭೆ ಕಟ್ಟಡದಲ್ಲಿ ಕಾಪು ಯೋಜನಾ ಪ್ರಾಧಿಕಾರದ ಕಚೇರಿಯು ನಿರ್ವಹಿಸುತ್ತಿದ್ದು ಎರಡು ಕಚೇರಿಗಳಿಗೆ ತೆರಳಲು ಒಂದೇ ದ್ವಾರ ಇರುವುದರಿಂದ ಹೀಗಾಗಿದೆ ಎಂದು ಹೇಳಲಾಗುತ್ತಿದೆ‌.ಸಾಮಾನ್ಯವಾಗಿ ಪುರಸಭೆ…

ಪುತ್ತೂರಿನ ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ – ನ್ಯೂಸ್ ಫೋಕಸ್

ಪುತ್ತೂರು : ಪುತ್ತೂರಿನ ಸಮಾಜ ಸೇವಕಿ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಳಿನಿ ಲೋಕಪ್ಪ ಗೌಡ (74ವ)ರವರು ಅಲ್ಪಕಾಲದ ಅಸೌಖ್ಯದಿಂದ ಫೆ.12ರಂದು ಬೆಳಗ್ಗೆ ನಿಧನರಾದರು. ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಲೋಕಪ್ಪ ಗೌಡ ಅವರ…

ಕಾರ್ಯಕ್ರಮಕ್ಕೆ ತೆರಳುವ ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ – ನ್ಯೂಸ್ ಫೋಕಸ್

ಬೆಳಾಲು ಆರಿಕೋಡಿ ದೇವಸ್ಥಾನ ಕಾರ್ಯಕ್ರಮ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳುವ ಸಂದರ್ಭ ಅಪಘಾತಕ್ಕಿಡಾದ ವ್ಯಕ್ತಿಯನ್ನು ಶಾಸಕ ಹರೀಶ್ ಪೂಂಜಾರವರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮಾನವಿಯತೆ ಮೆರೆದ ಘಟನೆ ನಡೆದಿದೆ. ಬಂದಾರು-ಕುಪ್ಪೆಟ್ಟಿ ಮುಖ್ಯ ರಸ್ತೆಯ ಪದ್ಮುಂಜ ಬಳಿ ಬೈಕ್ ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಬಿದ್ದಿದ್ದ…